Advertisement
Advertisement

ನಿಮ್ಮೂರಲ್ಲೇ ಇದ್ದು ಸರ್ಕಾರಿ ಕೆಲಸ ಮಾಡಲು ಇಲ್ಲಿದೆ ಅವಕಾಶ, ಬರೀ ಎಸ್‌ ಎಸ್‌ ಎಲ್‌ ಸಿ ಪಾಸಾಗಿದ್ರೂ ಸಾಕು!

Rapidreadnewlogo.svg .svgxml


Last Updated:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇರಳೆ ಗ್ರಾಮ ಪಂಚಾಯಿತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

Rapid Read
ಉದ್ಯೋಗಾವಕಾಶ
ಉದ್ಯೋಗಾವಕಾಶ

ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Department) ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಂಜನಗೂಡು ತಾಲ್ಲೂಕಿನ ನೇರಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ (Recruitment) ಪ್ರಕ್ರಿಯೆಯು ಗ್ರಾಮೀಣ ಪ್ರದೇಶಗಳಲ್ಲಿ ವಿಕಲಚೇತನರು, ಹಿರಿಯ ನಾಗರಿಕರು ಮತ್ತು ಅಗತ್ಯವಿರುವ (Need) ಇತರೆ ಬಲಹೀನ ವರ್ಗಗಳಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ಉದ್ದೇಶವನ್ನು (Aim) ಹೊಂದಿದೆ.

ಸರ್ಕಾರದ ಅಡಿಯಲ್ಲೇ ಕಾರ್ಯನಿರ್ವಹಿಸುವ ಸಂಸ್ಥೆ

ನೇರಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಬ್ಬ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಯು ಗ್ರಾಮೀಣ ಪುನರ್ವಸತಿ ಯೋಜನೆಯ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಬೇಕಾಗಿದ್ದು, ವಿಕಲಚೇತನರ ಗುರುತಿಸುವುದು, ಸರಕಾರಿ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು, ವಿವಿಧ ಇಲಾಖೆಗಳ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು, ಅಗತ್ಯ ದಾಖಲೆಗಳ ಸಿದ್ಧತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತಹ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾಗುತ್ತದೆ. ಈ ಹುದ್ದೆ ಗೌರವಧನ ಆಧಾರದ ಮೇಲಿನ ನೇಮಕಾತಿಯಾಗಿದ್ದು, ಮಾಸಿಕ ರೂ.10,000/- ಗೌರವಧನ ನೀಡಲಾಗುತ್ತದೆ.

ಇರುವ ನಿಬಂಧನೆಗಳೇನು?

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಸಮರ್ಥ ವಿಕಲಚೇತನ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ನಂಜನಗೂಡು ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಪಡೆದು, ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಜನವರಿ 20ರೊಳಗಾಗಿ ಸಂಬಂಧಪಟ್ಟ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಿಗದಿತ ಅವಧಿಯ ನಂತರ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಅಭ್ಯರ್ಥಿಗಳು ಅಂಗವಿಕಲರಾಗಿದ್ದು, ಎಸ್‌ ಎಸ್‌ ಎಲ್‌ ಸಿ ತೇರ್ಗಡೆ ಹೊಂದಿರಬೇಕು, ಹಾಗೆಯೇ 18-45 ವರ್ಷ ವಯಸ್ಸಿನವಾಗಿರಬೇಕು.

ಹಿರಿಯ ನಾಗರಿಕ ಹಾಗೂ ಅಂಗವಿಕಲರಿಗೆ ಸಹಕಾರಿ

ಗ್ರಾಮೀಣ ಪ್ರದೇಶಗಳಲ್ಲಿ ಪುನರ್ವಸತಿ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಸರಕಾರಿ ಯೋಜನೆಗಳ ಮಾಹಿತಿ ಹಾಗೂ ನೆರವು ಸುಲಭವಾಗಿ ಲಭ್ಯವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ

ಕನ್ನಡ ಸುದ್ದಿ/ ನ್ಯೂಸ್/Jobs/

Recruitment: ನಿಮ್ಮೂರಲ್ಲೇ ಇದ್ದು ಸರ್ಕಾರಿ ಕೆಲಸ ಮಾಡಲು ಇಲ್ಲಿದೆ ಅವಕಾಶ, ಬರೀ ಎಸ್‌ ಎಸ್‌ ಎಲ್‌ ಸಿ ಪಾಸಾಗಿದ್ರೆ ಸಾಕು!



Source link

Leave a Reply

Your email address will not be published. Required fields are marked *

TOP