Last Updated:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ಮತ್ತು ಬ್ಯಾಂಕಿಂಗ್ ಪಿ.ಒ. ಪರೀಕ್ಷೆಗಳಿಗೆ ಉಚಿತ ಪೂರ್ವ ತರಬೇತಿಯನ್ನು ಘೋಷಿಸಿದೆ. ಅರ್ಜಿ ಸಲ್ಲಿಕೆಗೆ ಜೂನ್ 15, 2025 ಕೊನೆಯ ದಿನ.
ಮೈಸೂರು: ಉದ್ಯೋಗ (Jobs) ಕನಸು ಕಾಣುವ ಹಿಂದುಳಿದ ವರ್ಗಗಳ ಯುವಕ-ಯುವತಿಯರಿಗೆ ಸಿಹಿ ಸುದ್ದಿ! ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆಗಳು (UPSC) ಮತ್ತು ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ (ಪಿ.ಒ.) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪೂರ್ವ ತರಬೇತಿಯನ್ನು (Free pre-training) ಘೋಷಿಸಿದೆ. ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಈ ಅವಕಾಶ ಲಭ್ಯವಿದ್ದು, ಆನ್ಲೈನ್ ಅರ್ಜಿ ಸಲ್ಲಿಕೆಗೆ (Online Application) ಜೂನ್ 15, 2025 ಕೊನೆಯ ದಿನಾಂಕವಾಗಿದೆ.
ಈ ತರಬೇತಿ ಕಾರ್ಯಕ್ರಮವು ಯುವಕರಿಗೆ ಉನ್ನತ ಉದ್ಯೋಗಗಳನ್ನು ಗಳಿಸಲು ಸಹಾಯಕವಾಗಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯ ವಿವರಗಳು, ಪರೀಕ್ಷಾ ಕೇಂದ್ರಗಳು, ದಿನಾಂಕ, ಮತ್ತು ಸಮಯವನ್ನು ಇಲಾಖೆಯ ವೆಬ್ಸೈಟ್ನಲ್ಲಿ ಶೀಘ್ರದಲ್ಲಿ ಪ್ರಕಟಿಸಲಾಗುವುದು.
ಅರ್ಹತೆ ಮಾನದಂಡ
- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ.
- ಹಿಂದುಳಿದ ವರ್ಗಗಳ (ಪ್ರವರ್ಗ-1, 2ಎ, 3ಎ, 3ಬಿ) ಅಭ್ಯರ್ಥಿಗಳು.
- ಕುಟುಂಬದ ವಾರ್ಷಿಕ ಆದಾಯ ರೂ. 5 ಲಕ್ಷದೊಳಗೆ.
- KEA ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ.
- ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ಅಥವಾ sevasindhu.karnataka.gov.in ಭೇಟಿ ನೀಡಿ.
- ಸಹಾಯವಾಣಿ: 8050370006.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗಧಿಗೊಳಿಸಿರುವ ಅರ್ಹತೆ ಮತ್ತು ಸೂಚನೆಗಳು: ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು, ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿರಬೇಕು, ಅಭ್ಯರ್ಥಿಯ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಗೆ ರೂ. 5.00 ಲಕ್ಷದೊಳಗಿರಬೇಕು. ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳು ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು, ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
Mysore,Mysore,Karnataka
June 06, 2025 2:27 PM IST

