Advertisement
Advertisement

2nd PUC Students: ಸಾರಿಗೆ ಇಲಾಖೆ ಭರ್ಜರಿ ಗುಡ್ ನ್ಯೂಸ್! ಪರೀಕ್ಷೆ ಬರೆಯೋಕೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಫುಲ್ ಫ್ರೀ!

1777310509 c63b1590 aa8b 4609 aeec 852dc34f3c41 2026 04 57bcf929ade7feafd590935fb8da726f 1200x675.jpg


Last Updated:

Tree Bus Travel For Students: ಪಿಯುಸಿಯ ಎರಡನೇ ಹಂತದ ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಿಹಿ ಸುದ್ದಿಯೊಂದನ್ನು ನೀಡಿದೆ. ಅದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ ಇಲ್ಲಿದೆ. 

ಸಾಂಕೇತಿಕ ಚಿತ್ರ!
ಸಾಂಕೇತಿಕ ಚಿತ್ರ!

ದ್ವಿತೀಯ ಪಿಯುಸಿಯ (2nd Puc) ಎರಡನೇ ಹಂತದ ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ ವಿದ್ಯಾರ್ಥಿಗಳಿಗೆ (Students) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸಿಹಿ ಸುದ್ದಿಯೊಂದನ್ನು (Good News) ನೀಡಿದೆ. ಅದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ ಇಲ್ಲಿದೆ. 

ವಿದ್ಯಾರ್ಥಿಗಳು ಗುಡ್​ ನ್ಯೂಸ್​!

ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ (Exam Center) ಹೋಗಲು ಮತ್ತು ಬರಲು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಯಾಣದ ಹೊರೆಯಾಗಬಾರದು ಎಂಬ ಮಾನವೀಯ ದೃಷ್ಟಿಯಿಂದ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.

ಹಾಲ್ ಟಿಕೆಟ್ ತೋರಿಸಿದರೆ ಸಾಕು!

ಈ ಉಚಿತ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳು ಯಾವುದೇ ಪ್ರತ್ಯೇಕ ಪಾಸ್‌ಗಳನ್ನು ಪಡೆಯುವ ಅಗತ್ಯವಿಲ್ಲ. ಬಸ್ ಹತ್ತಿದಾಗ ತಮ್ಮ ಬಳಿ ಇರುವ ಪರೀಕ್ಷಾ ಪ್ರವೇಶ ಪತ್ರವನ್ನು ಬಸ್ ಕಂಡೆಕ್ಟರ್​ಗೆ ತೋರಿಸಿದರೆ ಸಾಕು. ನಗರ ಸಾರಿಗೆ, ಹೊರವಲಯದ ಬಸ್‌ಗಳು, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ ಪ್ರಯಾಣಿಸಬಹುದು. ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತು ದೂರದ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಾದ ಅಭ್ಯರ್ಥಿಗಳಿಗೆ ವರದಾನವಾಗಲಿದೆ.

ಪರೀಕ್ಷಾ ದಿನಾಂಕಗಳು ಮತ್ತು ವ್ಯಾಪ್ತಿ!

ನಿಗಮದ ಪ್ರಕಟಣೆಯ ಪ್ರಕಾರ, ಏಪ್ರಿಲ್ 30, 2026 ರಿಂದ ಮೇ 13, 2026 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಎಲ್ಲಾ ದಿನಗಳಂದು ಈ ಸೌಲಭ್ಯ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಗಳಂದು ಮಾತ್ರ ಈ ಸೌಲಭ್ಯದ ಲಾಭ ಪಡೆಯಬಹುದಾಗಿದೆ. ಕಳೆದ ವರ್ಷಗಳಿಂದ ಸರ್ಕಾರವು ವಿದ್ಯಾರ್ಥಿ ಸ್ನೇಹಿ ಕ್ರಮಗಳನ್ನು ಜಾರಿಗೆ ತರುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಈ ಬಾರಿಯೂ ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ‘ಕೋರಿಕೆ ನಿಲುಗಡೆ’!

ಬಸ್‌ಗಳು ನಿಗದಿತ ನಿಲ್ದಾಣಗಳಲ್ಲಿ ಮಾತ್ರವಲ್ಲದೆ, ಪರೀಕ್ಷಾ ಕೇಂದ್ರಗಳ ಸಮೀಪವಿರುವ ಸ್ಥಳಗಳಲ್ಲಿ ವಿದ್ಯಾರ್ಥಿಗಳು ಇಳಿಯಲು ಅಥವಾ ಹತ್ತಲು ವಿನಂತಿಸಿದರೆ ಅಲ್ಲಿ ಬಸ್ ನಿಲ್ಲಿಸುವಂತೆ ಚಾಲಕರಿಗೆ ಮತ್ತು ನಿರ್ವಾಹಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಬಸ್ ನಿಲ್ದಾಣದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಮಯ ಉಳಿತಾಯವಾಗಲಿದೆ. ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಲ್ಲಿ ಸಿಲುಕದೆ ಸರಿಯಾದ ಸಮಯಕ್ಕೆ ಕೇಂದ್ರಕ್ಕೆ ತಲುಪಲು ಈ ಕ್ರಮ ಸಹಕಾರಿಯಾಗಿದೆ.

ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಆದೇಶ!

ಪರೀಕ್ಷಾ ಪ್ರವೇಶ ಪತ್ರ ಹೊಂದಿರುವ ವಿದ್ಯಾರ್ಥಿಗಳಿಗೆ ಯಾವುದೇ ಕಿರಿಕಿರಿ ನೀಡದೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಕೆಎಸ್ಆರ್‌ಟಿಸಿ ತನ್ನ ಸಿಬ್ಬಂದಿಗಳಿಗೆ ಸೂಚಿಸಿದೆ. ಒಂದು ವೇಳೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯದ ವಿಚಾರದಲ್ಲಿ ಸಮಸ್ಯೆ ಉಂಟಾದರೆ ಹತ್ತಿರದ ಡಿಪೋ ಮ್ಯಾನೇಜರ್ ಅಥವಾ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ. ಒಟ್ಟಾರೆಯಾಗಿ, ಈ ಯೋಜನೆಯು ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪೂರಕವಾಗಿದ್ದು, ಯಾವುದೇ ಆತಂಕವಿಲ್ಲದೆ ಪರೀಕ್ಷೆ ಎದುರಿಸಲು ನೆರವಾಗಲಿದೆ.

ಪೋಷಕರಿಂದ ಶ್ಲಾಘನೆ!

ಸಾರಿಗೆ ನಿಗಮದ ಈ ನಿರ್ಧಾರಕ್ಕೆ ಪೋಷಕರು ಮತ್ತು ಶಿಕ್ಷಣ ತಜ್ಞರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. “ಕೆಲವೊಮ್ಮೆ ಪರೀಕ್ಷಾ ಕೇಂದ್ರಗಳು ಮನೆಗಳಿಂದ ಹತ್ತಾರು ಕಿಲೋಮೀಟರ್ ದೂರವಿರುತ್ತವೆ. ಅಂಥ ಸಮಯದಲ್ಲಿ ಖಾಸಗಿ ವಾಹನಗಳ ಅವಲಂಬನೆ ಅಥವಾ ದುಬಾರಿ ವೆಚ್ಚದ ಪ್ರಯಾಣ ತಪ್ಪಿಸಲು ಸಾರಿಗೆ ಸಂಸ್ಥೆಯ ಈ ನಡೆಯು ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿದೆ,” ಎಂದು ಪೋಷಕರೊಬ್ಬರು ತಮ್ಮ ಸಂತಸ ಹಂಚಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *

TOP