Last Updated:
ಈ ಬಾರಿ ಫಲಿತಾಂಶದಲ್ಲಿ ವಿಶೇಷವಾಗಿ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಮಕ್ಕಳ ಫಲಿತಾಂಶದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಎಲ್ಲಾ ಕಡೆ ಉತ್ತಮ ಫಲಿತಾಂಶ ಬಂದಿದೆ.
ಬೆಂಗಳೂರು(ಏ.23): ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ. ಒಟ್ಟಾರೆ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ (80.04) ಹೋಲಿಸಿದರೆ ಶೇ. 14.06ರಷ್ಟು ಅಧಿಕ ಫಲಿತಾಂಶ ದಾಖಲಾಗಿದೆ. ಇದು ಇತಿಹಾಸದಲ್ಲೇ ಮೊದಲ ಬಾರಿ ಅತ್ಯಧಿಕ ದಾಖಲೆ ಫಲಿತಾಂಶವಾಗಿದೆ. ಎಂದಿನಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ 8,37,357 ವಿದ್ಯಾರ್ಥಿಗಳ ಪೈಕಿ 6,85,156 ಮಂದಿ ತೇರ್ಗಡೆಯಾಗಿದ್ದಾರೆ.
4,40,159 ಬಾಲಕರ ಪೈಕಿ 3,42,663 ಮಂದಿ (ಶೇ. 77.85) ಉತ್ತೀರ್ಣರಾದರೆ, 392922 ಬಾಲಕಿಯರ ಪೈಕಿ 377922 ಮಂದಿ (ಶೇ. 96.18) ತೇರ್ಗಡೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಕಲಬುರಗಿ ಜಿಲ್ಲೆ ಕೊನೇ ಸ್ಥಾನ ಪಡೆದಿದೆ.
ಈ ಬಾರಿ ಫಲಿತಾಂಶದಲ್ಲಿ ವಿಶೇಷವಾಗಿ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದ ಮಕ್ಕಳ ಫಲಿತಾಂಶದಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಎಲ್ಲಾ ಕಡೆ ಉತ್ತಮ ಫಲಿತಾಂಶ ಬಂದಿದೆ.
ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ಈ ಬಾರಿ ಒಟ್ಟು 442280 ಮಂದಿ ಪರೀಕ್ಷೆ ಬರೆದಿದ್ದು, ಇದರಲ್ಲಿ 419261 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 94.80). ಅತ್ತ ನಗರ ಪ್ರದೇಶದಲ್ಲಿ 327929 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 305533 ಮಂದಿ (ಶೇ. 93.2)ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಸ್ಥಾನ ಪಡೆದಿದ್ದಾರೆ.
Bangalore,Karnataka

