Advertisement
Advertisement

Mandya Students: SSLC, PUC, ಪದವಿ ಪಾಸಾದವರಿಗೆ ಬಂಪರ್ ಆಫರ್, ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ಹಣ!

Whatsapp image 2026 05 07 at 2.16.48 pm 2026 05 8dcd986d45d16af5864facf1a262db9b 1200x675.jpeg


Last Updated:

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ 2025-26ರಲ್ಲಿ SSLC ನಂತರದ ಕೋರ್ಸ್‌ಗಳಲ್ಲಿ ಫಸ್ಟ್ ಕ್ಲಾಸ್ ಪಾಸ್ ಆದವರಿಗೆ ಆನ್‌ಲೈನ್ ಪ್ರೈಜ್ ಮನಿ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ಸಮಾಜ ಕಲ್ಯಾಣ ಪ್ರಶಸ್ತಿ ಹಣ
ಕರ್ನಾಟಕ ಸಮಾಜ ಕಲ್ಯಾಣ ಪ್ರಶಸ್ತಿ ಹಣ

ಮಂಡ್ಯ: ನೀವು ಎಸ್‍ಎಸ್‍ಎಲ್‍ಸಿ (SSLC), ಪಿಯುಸಿ (PUC) ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಭರ್ಜರಿ ಅಂಕ ಗಳಿಸಿ ಪಾಸ್ ಆಗಿದ್ದೀರಾ? ಅಥವಾ ಮೆಡಿಕಲ್, ಇಂಜಿನಿಯರಿಂಗ್, ಅಗ್ರಿಕಲ್ಚರ್, ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದೀರಾ? ಹಾಗಿದ್ದರೆ ನಿಮಗೊಂದು ಸೂಪರ್ ಸುದ್ದಿ ಇದೆ. ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನವನ್ನು ಜಮೆ ಮಾಡಲು ಮುಂದಾಗಿದೆ. ಹೌದು, ಸಮಾಜ ಕಲ್ಯಾಣ ಇಲಾಖೆಯು (Department of Social Welfare) ಅರ್ಹ ವಿದ್ಯಾರ್ಥಿಗಳಿಂದ (Students) ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

2025-26ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ಯಾವುದೇ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದು. ಇಲಾಖೆಯು ಇದಕ್ಕಾಗಿ ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಅತ್ಯಂತ ಸರಳಗೊಳಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‍ಸೈಟ್ https://swdservices.karnataka.gov.in/PrizeMoneyClientApp/ ಗೆ ಭೇಟಿ ನೀಡುವ ಮೂಲಕ ಇಂದೇ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಗತ್ಯವಿರುವ ಮುಖ್ಯ ದಾಖಲೆಗಳು

-ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ.

-ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ.

-ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಪಾಸ್ ಬುಕ್



Source link

Leave a Reply

Your email address will not be published. Required fields are marked *

TOP