Advertisement
Advertisement

Job: ಬೆಂಗಳೂರಿನಲ್ಲಿ ಉದ್ಯೋಗ, ₹75,000 ಸಂಬಳ; ಇಂದೇ ಅರ್ಜಿ ಸಲ್ಲಿಸಿ!

Bhimasi 01 2026 05 23t225308.170 2026 05 883ae14f0448030a4b48c1e3cee79e26 1200x675.jpg


Last Updated:

Job: ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2026ರ ಜೂನ್ 6 ಆಗಿದೆ. ಆದ್ದರಿಂದ ಆಸಕ್ತ ಅಭ್ಯರ್ಥಿಗಳು ತಡ ಮಾಡದೆ ಬೇಗನೇ ಅರ್ಜಿ ಸಲ್ಲಿಸುವುದು ಉತ್ತಮ. ನೇಮಕಾತಿ ಕುರಿತು ಸಂಪೂರ್ಣ ವಿವರ ಇಲ್ಲಿದೆ.  

ಸಾಂಕೇತಿಕ ಚಿತ್ರ!
ಸಾಂಕೇತಿಕ ಚಿತ್ರ!

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು 2026ನೇ ಸಾಲಿನ ನೇಮಕಾತಿ (Requirement) ಅಧಿಸೂಚನೆಯನ್ನು (Notification) ಪ್ರಕಟಿಸಿದ್ದು, ಒಟ್ಟು 3 ಹುದ್ದೆಗಳಿಗೆ ಅರ್ಜಿಗಳನ್ನು(Application) ಆಹ್ವಾನಿಸಿದೆ. ಈ ನೇಮಕಾತಿಯಡಿ “ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್” ಹಾಗೂ “ಯಂಗ್ ಪ್ರೊಫೆಷನಲ್” ಹುದ್ದೆಗಳು ಭರ್ತಿಯಾಗಲಿವೆ. ಸರ್ಕಾರಿ ಕ್ಷೇತ್ರದಲ್ಲಿ (Government Sector) ಉತ್ತಮ ಸಂಬಳದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಳ್ಳೆಯ ಅವಕಾಶವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸಂಬಳ ಎಷ್ಟಿದೆ?

ಈ ನೇಮಕಾತಿಯಲ್ಲಿ ಒಟ್ಟು ಒಂದು ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್ ಹುದ್ದೆ ಹಾಗೂ ಎರಡು ಯಂಗ್ ಪ್ರೊಫೆಷನಲ್ ಹುದ್ದೆಗಳಿವೆ. ಸಬ್ಜೆಕ್ಟ್ ಮ್ಯಾಟರ್ ಎಕ್ಸ್‌ಪರ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ₹1 ಲಕ್ಷ ಸಂಬಳ ನೀಡಲಾಗುತ್ತದೆ. ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ತಿಂಗಳಿಗೆ ₹75 ಸಾವಿರ ಗೌರವಧನ ದೊರೆಯಲಿದೆ. ಈ ಹುದ್ದೆಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಗಳಿಗೆ ಸಂಬಂಧಿಸಿದ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಹೆಚ್ಚಿನ ಅರ್ಹತೆ ಮತ್ತು ಅನುಭವ ಹೊಂದಿರುವವರಿಗೆ ಆದ್ಯತೆ ಸಿಗುವ ಸಾಧ್ಯತೆ ಇದೆ. ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಾಗಿರಬೇಕು ಎಂದು ತಿಳಿಸಲಾಗಿದೆ. ಮೀಸಲು ವರ್ಗಗಳಿಗೆ ವಯೋಸಡಿಲಿಕೆ ಅನ್ವಯವಾಗಲಿವೆ.

ಆಯ್ಕೆ ಪ್ರಕ್ರಿಯೆ ಹೇಗಿದೆ?

ಆಯ್ಕೆ ಪ್ರಕ್ರಿಯೆಯಲ್ಲಿ ಲಿಖಿತ ಪರೀಕ್ಷೆ, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ನಡೆಯಬಹುದು. ಅಂತಿಮ ಆಯ್ಕೆಯನ್ನು ಅಭ್ಯರ್ಥಿಗಳ ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ನೇಮಕಾತಿ ಕುರಿತ ಹೆಚ್ಚಿನ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಲು ಇಲಾಖೆ ಸೂಚಿಸಿದೆ.

ಹೇಗಿದೆ ಅರ್ಜಿ ಸಲ್ಲಿಕೆ ವಿಧಾನ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು. ಅರ್ಜಿಯನ್ನು “ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು” ವಿಳಾಸಕ್ಕೆ ಕಳುಹಿಸಬಹುದು. ಜೊತೆಗೆ ಇಮೇಲ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಯಾವಾಗ ಕೊನೇ ದಿನ?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2026ರ ಜೂನ್ 6 ಆಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಆಸಕ್ತ ಅಭ್ಯರ್ಥಿಗಳು ತಡ ಮಾಡದೆ ಬೇಗನೇ ಅರ್ಜಿ ಸಲ್ಲಿಸುವುದು ಉತ್ತಮ.

ಯುವಕರಿಗೆ ಸುವರ್ಣಾವಕಾಶ!

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ನೇಮಕಾತಿಗಳು ಹೆಚ್ಚಾಗುತ್ತಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿಯೂ ಉದ್ಯೋಗಾವಕಾಶಗಳು ಲಭ್ಯವಾಗುತ್ತಿವೆ. ಉತ್ತಮ ಸಂಬಳ ಮತ್ತು ಸರ್ಕಾರಿ ಕ್ಷೇತ್ರದಲ್ಲಿ ಅನುಭವ ಪಡೆಯಲು ಬಯಸುವ ಯುವಕರಿಗೆ ಈ ನೇಮಕಾತಿ ಸಹಾಯಕವಾಗಬಹುದು. ಸಂಬಂಧಿತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸುವುದು ಒಳಿತು.



Source link

Leave a Reply

Your email address will not be published. Required fields are marked *

TOP