Advertisement
Advertisement

Recruitment News: ರಾಜ್ಯದಲ್ಲಿ ಹೊಸ ಸರ್ಕಾರ ಬರ್ತಿದ್ದಂತೆ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!

Another tragedy on same road in bengaluru mother falls with son after recent child road accident 202.jpeg


Last Updated:

ರಾಜ್ಯದಲ್ಲಿ ಇದೀಗ ಹೊಸ ಸರ್ಕಾರ ರಚನೆಯಾಗಿದೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್​​ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಇದೀಗ ಉದ್ಯೋಗಾಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಏನದು? ಇಲ್ಲಿದೆ ನೋಡಿ.

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್​​ (CM D.K Shivakumar) ಅಧಿಕಾರವಹಿಸಿಕೊಂಡು ಹೊಸ ಸರ್ಕಾರ (New Government) ರಚನೆ ಮಾಡಿದ್ದಾರೆ. ಈ ಬೆನ್ನಲ್ಲೇ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಒಂದು ರೀತಿಯ ಸಂತಸದ ಸುದ್ದಿ ಲಭ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಿವಿಲ್ ಕಾನ್ಸ್‌ಟೇಬಲ್ (Civil Constable) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಬಂದಿದೆ. ಇದು ಉದ್ಯೋಗಾಕಾಂಕ್ಷಿಗಳ ಬಹುದಿನಗಳ ಕನಸು ಎಂದೇ ಹೇಳಬಹುದು.

ಹೌದು, ಹೊಸ ಸರ್ಕಾರ ರಚನೆಯಾಗ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುತ್ತಿರುವ ಸಾವಿರಾರು ಯುವಕರಿಗೆ ಇದು ಮಹತ್ವದ ಅವಕಾಶವಂತಾಗಿದೆ. 3395 ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಅಧಿಸೂಚನೆ!

ಹೌದು, ಈ ಬಾರಿ ಒಟ್ಟು 3395 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ ವಿವಿಧ ವರ್ಗಗಳಿಗೆ ಪ್ರತ್ಯೇಕವಾಗಿ ಹುದ್ದೆಗಳನ್ನು ಮೀಸಲಿಡಲಾಗಿದೆ. ಪುರುಷರಿಗೆ 2266 ಕಾನ್ಸ್‌ಟೇಬಲ್ ಹುದ್ದೆಗಳನ್ನು ಮೀಸಲು ಮಾಡಲಾಗಿದ್ದು, ಮಹಿಳೆಯರಿಗೆ 755 ಕಾನ್ಸ್‌ಟೇಬಲ್ ಹುದ್ದೆಗಳು ಲಭ್ಯವಿರುತ್ತವೆ. ಇದರಿಂದ ಮಹಿಳೆಯರು ಕೂಡ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ.

ಸೇವೆಯಲ್ಲಿ ನಿರತರಾಗಿರುವವರಿಗೆ ಸಹ ಅವಕಾಶ!

ಆದೇ ರೀತಿ, ಈಗಾಗಲೇ ಸೇವೆಯಲ್ಲಿ ನಿರತರಾಗಿರುವವರಿಗೆ ಸಹ ಅವಕಾಶ ಕಲ್ಪಿಸಲಾಗಿದೆ. ಸೇವಾ ನಿರತ ಪುರುಷ ಅಭ್ಯರ್ಥಿಗಳಿಗೆ 257 ಹುದ್ದೆಗಳು ಮೀಸಲಾಗಿದ್ದು, ಸೇವಾ ನಿರತ ಮಹಿಳಾ ಅಭ್ಯರ್ಥಿಗಳಿಗೆ 82 ಹುದ್ದೆಗಳು ಲಭ್ಯವಿರುತ್ತವೆ. ಇದು ಈಗಾಗಲೇ ಸರ್ಕಾರಿ ಸೇವೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ತಮ್ಮ ವೃತ್ತಿಜೀವನವನ್ನು ಪೊಲೀಸ್ ಇಲಾಖೆಯಲ್ಲಿ ಮುಂದುವರಿಸಿಕೊಳ್ಳಲು ಒಳ್ಳೆಯ ಅವಕಾಶವಾಗಿದೆ.

ಗಮನಾರ್ಹ ವಿಷಯವೆಂದರೆ, ಈ ಬಾರಿ ತೃತೀಯ ಲಿಂಗದ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಒಟ್ಟು 35 ಹುದ್ದೆಗಳು ತೃತೀಯ ಲಿಂಗದವರಿಗೆ ಮೀಸಲಾಗಿದ್ದು, ಸಮಾಜದ ಎಲ್ಲ ವರ್ಗಗಳು ಪೊಲೀಸ್ ಇಲಾಖೆಯಲ್ಲಿ ಸ್ಥಾನ ಪಡೆಯಲು ಅವಕಾಶ ಕಲ್ಪಿಸುವ ಪ್ರಯತ್ನ ಇದಾಗಿದೆ. ಇದರಿಂದ ಪೊಲೀಸ್ ಇಲಾಖೆಯಲ್ಲಿ ಒಳಗೊಂಡಿಕೆ (inclusive) ಮತ್ತು ಸಮಾನಾವಕಾಶದ ತತ್ವವನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಹೆಜ್ಜೆಯಿಟ್ಟಂತಾಗಿದೆ.

ಲಿಖಿತ ಪರೀಕ್ಷೆ ಮೂಲಕ ನೇಮಕಾತಿ

ಈ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಸಂಪೂರ್ಣವಾಗಿ ಲಿಖಿತ ಪರೀಕ್ಷೆ ಮೂಲಕ ನಡೆಯಲಿದೆ. ಅಂದರೆ, ಮೊದಲಿಗೆ ಅಭ್ಯರ್ಥಿಗಳು ಲಿಖಿತ ಪರೀಕ್ಷೆಯನ್ನು ಎದುರಿಸಬೇಕು. ಈ ಪರೀಕ್ಷೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಯಾವ ವಿಷಯಗಳು ಇರುತ್ತವೆ, ಅಂಕಗಳ ಹಂಚಿಕೆ ಹೇಗಿರುತ್ತದೆ, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ, ಅರ್ಹತಾ ಷರತ್ತುಗಳು ಇತ್ಯಾದಿ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ನೀಡಲಾಗುತ್ತದೆ.

ಈ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority – KEA) ನಡೆಸಲಿದೆ. ರಾಜ್ಯ ಸರ್ಕಾರದ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಈ ಪ್ರಾಧಿಕಾರವೇ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನೂ ನಡೆಸಲಿದ್ದು, ಪರೀಕ್ಷೆಯ ದಿನಾಂಕ, ಪರೀಕ್ಷಾ ಕೇಂದ್ರಗಳ ವಿವರ, ಪ್ರವೇಶ ಪತ್ರ ಡೌನ್‌ಲೋಡ್ ಮಾಡುವ ವಿಧಾನ ಎಲ್ಲವೂ KEA ಮೂಲಕ ತಿಳಿಸಲಾಗುತ್ತದೆ.

ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ನೇಮಕಾತಿ!

ಸಾರಾಂಶವಾಗಿ ನೋಡಿದರೆ, ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಇಷ್ಟು ದೊಡ್ಡ ಪ್ರಮಾಣದ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಅಧಿಸೂಚನೆ ಹೊರಬರುವುದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ನಿರೀಕ್ಷೆ ಮೂಡಿದೆ. ವಿಶೇಷವಾಗಿ ಪುರುಷ, ಮಹಿಳೆ, ಸೇವಾ ನಿರತರು ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಹುದ್ದೆಗಳನ್ನು ಮೀಸಲಿಡುವ ಮೂಲಕ ಸಮಾಜದ ಎಲ್ಲ ವರ್ಗಗಳಿಗೂ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಪ್ರಯೋಜನಪಡಿಸಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಸಿದ್ಧತೆ ಆರಂಭಿಸಿ, ಅಧಿಸೂಚನೆಯ ಸಂಪೂರ್ಣ ವಿವರಗಳನ್ನು ಗಮನಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ.

(ವರದಿ: ಮುನಿರಾಜು, ನ್ಯೂಸ್18 ಕನ್ನಡ, ಬೆಂಗಳೂರು)



Source link

Leave a Reply

Your email address will not be published. Required fields are marked *

TOP