Last Updated:
ಮಂಡ್ಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ 21 ಸಂಪನ್ಮೂಲ ಶಿಕ್ಷಕರ ಹುದ್ದೆಗಳಿಗೆ ಜೂನ್ 19, 2026 ರವರೆಗೆ ಅರ್ಜಿ ಆಹ್ವಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಾವಿದರಿಗೆ ಜೂನ್ 15 ರವರೆಗೆ ಅವಕಾಶ
ಮಂಡ್ಯ (Mandya) ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ (Job Seeker) ಮತ್ತು ಪ್ರತಿಭಾನ್ವಿತ ಕಲಾವಿದರಿಗೆ (Artists) ಸದ್ಯ ಎರಡು ಪ್ರಮುಖ ಅವಕಾಶಗಳು ಲಭ್ಯವಾಗಿವೆ. ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳು ಪ್ರತ್ಯೇಕ ಪ್ರಕಟಣೆಗಳ ಮೂಲಕ ಅರ್ಜಿಗಳನ್ನು ಆಹ್ವಾನಿಸಿವೆ. 2026-27ನೇ ಸಾಲಿನ ಯೋಜನೆಯಡಿ, ಜಿಲ್ಲೆಯ 08 ಬ್ಲಾಕ್ಗಳ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿ ಇರುವ ಸಮನ್ವಯ ಶಿಕ್ಷಣ (Education) ಸಂಪನ್ಮೂಲ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ (Application) ಆಹ್ವಾನಿಸಲಾಗಿದೆ. ಒಟ್ಟು 21 ಹುದ್ದೆಗಳು (ಪ್ರಾಥಮಿಕ ವಿಭಾಗದಲ್ಲಿ 06 ಹಾಗೂ ಪ್ರೌಢ ವಿಭಾಗದಲ್ಲಿ 15) ನೇರಗುತ್ತಿಗೆ ಆಧಾರದ ಮೇಲೆ ಭರ್ತಿಯಾಗಲಿವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2026-27ನೇ ಸಾಲಿನ ಸಾಂಸ್ಕೃತಿಕ ಸೌರಭ, ಯುವ ಸೌರಭ ಹಾಗೂ ಚಿಗುರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಆಸಕ್ತಿ ಇರುವ ಕಲಾವಿದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಕಲಾವಿದರು ತಮ್ಮ ವಿವರಗಳೊಂದಿಗೆ ಮಂಡ್ಯದ ಕರ್ನಾಟಕ ಕಲಾಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಜೂನ್ 15, 2026 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ.
ಹೆಚ್ಚಿನ ಮಾಹಿತಿಗಾಗಿ
ಕಚೇರಿಯ ದೂರವಾಣಿ ಸಂಖ್ಯೆ 08232-223197 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
Mandya,Mandya,Karnataka
Jun 09, 2026 10:43 AM IST

