Last Updated:
ಅರ್ಜಿ ಸಲ್ಲಿಸಲು ಜೂನ್ 30, ಸಂಜೆ 5.30 ಗಂಟೆಯವರೆಗೆ ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು.
ಚಿಕ್ಕಮಗಳೂರು: ಕೃಷಿ ಮತ್ತು ತೋಟಗಾರಿಕೆ ಪದವೀಧರರಿಗೆ ಸರ್ಕಾರಿ ಉದ್ಯೋಗದ (Government Job) ಕನಸು ಇದ್ದರೆ ಈ ಸುದ್ದಿ ನಿಮಗಾಗಿಯೇ ಇದೆ! ಆತ್ಮ (ATMA) ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30, ಸಂಜೆ 5.30 ಗಂಟೆ ಕೊನೆಯ ಗಡುವು ಆಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಇನ್ನು ತಡ ಮಾಡದೆ ಅರ್ಜಿ ಸಲ್ಲಿಸಬೇಕು.
ಈ 14 ಹುದ್ದೆಗಳಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ (BTM) ಹುದ್ದೆಗಳು 2 ಇದ್ದು, ಅಜ್ಜಂಪುರ ಮತ್ತು ಕಳಸ ತಾಲ್ಲೂಕಿನಲ್ಲಿ ತಲಾ ಒಂದು ಹುದ್ದೆ ಇದೆ. ಉಳಿದ 12 ಹುದ್ದೆಗಳು ಸಹಾಯಕ ತಾಂತ್ರಿಕ ವ್ಯವಸ್ಥಾಪಕ (ATM) ಹುದ್ದೆಗಳಾಗಿದ್ದು, ಚಿಕ್ಕಮಗಳೂರು ತಾಲ್ಲೂಕಿನ ಕಸಬಾ, ಅಂಬಳೆ, ಆವುತಿ, ಜಾಗರ ಮತ್ತು ಖಾಂಡ್ಯ ಹೋಬಳಿಗಳಲ್ಲಿ 5, ಮೂಡಿಗೆರೆ ತಾಲ್ಲೂಕಿನ ಕಸಬಾ ಮತ್ತು ಬಾಳೂರು ಹೋಬಳಿಗಳಲ್ಲಿ 2, ಕೊಪ್ಪ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ 1, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ 1, ತರೀಕೆರೆ ತಾಲ್ಲೂಕಿನ ಕಸಬಾ ಮತ್ತು ಲಕ್ಕವಳ್ಳಿ ಹೋಬಳಿಗಳಲ್ಲಿ 2, ಹಾಗೂ ಲಿಂಗದಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ 1 ಹುದ್ದೆ ಇದೆ.
ಅರ್ಜಿ ಸಲ್ಲಿಸಲು ಇಲ್ಲಿದೆ ವಿಳಾಸ
Chikmagalur,Chikmagalur,Karnataka

