Advertisement
Advertisement

Artist: ಮೈಸೂರಿನಲ್ಲಿ ಯುವ ಕಲಾವಿದರಿಗೆ ಬಂಪರ್ ಆಫರ್, ಸರ್ಕಾರಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅರ್ಜಿ ಸಲ್ಲಿಸಿ!

Whatsapp image 2026 06 09 at 4.25.17 pm 1 2026 06 51a318f44c646d1e8574a83d3a5817aa 1200x675.jpeg


Last Updated:

ಮೈಸೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸೌರಭ, ಯುವ ಸೌರಭ, ಚಿಗುರು ಕಾರ್ಯಕ್ರಮಗಳಿಗೆ ಕಲಾವಿದರಿಂದ ಜೂನ್ 15 ರೊಳಗೆ ಅರ್ಜಿ ಆಹ್ವಾನಿಸಿದೆ.

ಯುವ ಕಲಾವಿದರಿಗೆ ಒತ್ತು
ಯುವ ಕಲಾವಿದರಿಗೆ ಒತ್ತು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ತುದಿಗಾಲಿನಲ್ಲಿ ಕಾಯುತ್ತಿರುವ ಕಲಾವಿದರಿಗೆ ಇದೀಗ ಸುವರ್ಣಾವಕಾಶ ಒದಗಿಬಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು (Department of Kannada and Culture) ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಲು ಆಸಕ್ತ ಕಲಾವಿದರಿಂದ (Artist) ಅರ್ಜಿಗಳನ್ನು (Application) ಆಹ್ವಾನಿಸಿದೆ.

ಏನಿದು ಅವಕಾಶ?

ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಇಲಾಖೆಯು ‘ಸಾಂಸ್ಕೃತಿಕ ಸೌರಭ’, ‘ಯುವ ಸೌರಭ’ ಹಾಗೂ ‘ಚಿಗುರು’ ಎಂಬ ಮೂರು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಜನಪದ, ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ನೃತ್ಯ, ನಾಟಕ ಮತ್ತು ವಾದ್ಯ ಸಂಗೀತದಂತಹ ವಿವಿಧ ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ವೈಯಕ್ತಿಕ ಕಲಾವಿದರು ಹಾಗೂ ಕಲಾತಂಡಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

ಯುವ ಕಲಾವಿದರಿಗೆ ಒತ್ತು

ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಮುಖ್ಯವಾಗಿ ಹೊಸ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರ್ಕಾರಿ ವೇದಿಕೆಯನ್ನು ಕಲ್ಪಿಸಿಕೊಡುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಹಿಡಿದು ಅನುಭವಿ ಕಲಾವಿದರವರೆಗೆ ಎಲ್ಲರೂ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಭರ್ತಿ ಮಾಡಿ ಜೂನ್ 15 ರ ಸಂಜೆ 5.30 ಗಂಟೆಯೊಳಗೆ ಮೈಸೂರಿನ ಕರ್ನಾಟಕ ಕಲಾಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 0821-2513225 ಗೆ ಕರೆ ಮಾಡಿ ವಿಚಾರಿಸಬಹುದು.



Source link

Leave a Reply

Your email address will not be published. Required fields are marked *

TOP