Last Updated:
ಚಿಕ್ಕಮಗಳೂರು ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ ವಿಶೇಷ ಡಿ.ಇ.ಡಿ ಅರ್ಹತೆ ಹೊಂದಿದವರಿಗೆ ಬಿ.ಐ.ಇ.ಆರ್.ಟಿ ಸಂಪನ್ಮೂಲ ಶಿಕ್ಷಕ ಹುದ್ದೆಗಳಿಗೆ ನೇರ ಗುತ್ತಿಗೆ ನೇಮಕ, ಅರ್ಜಿ ಕೊನೆ ದಿನ ಜೂನ್ 23, 2026 ಸಂಜೆ 5 ಗಂಟೆ
ಚಿಕ್ಕಮಗಳೂರಿನ (Chikkamagaluru) ಶಿಕ್ಷಕ (Teacher) ಹುದ್ದೆಯ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ಉದ್ಯೋಗಕ್ಕಾಗಿ (Job) ಕಾಯುತ್ತಿರುವ ಡಿ.ಇ.ಡಿ ಪದವೀಧರರಿಗಾಗಿ ಸರ್ಕಾರಿ (Govt) ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಸಮಗ್ರ ಶಿಕ್ಷಣ ಕರ್ನಾಟಕ ಇಲಾಖೆಯು ಕಲ್ಪಿಸಿಕೊಟ್ಟಿದೆ. ಇದು ನೇರ ಗುತ್ತಿಗೆ ಆಧಾರದ ಮೇಲೆ ನಡೆಯುತ್ತಿರುವ ವಿಶೇಷ ನೇಮಕಾತಿಯಾಗಿದ್ದು, ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ಏನಿದು ಹುದ್ದೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು?
ಸಮಗ್ರ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ, ವಿಶೇಷ ಅಗತ್ಯವುಳ್ಳ ಮಕ್ಕಳ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲೆಯ ಬ್ಲಾಕ್ಗಳಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ‘ಬಿ.ಐ.ಇ.ಆರ್.ಟಿ’ ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆರ್.ಸಿ.ಐ ನಿಯಮಾವಳಿಗಳ ಪ್ರಕಾರ ನಿಗದಿಪಡಿಸಿದ ವಿಶೇಷ ಡಿ.ಇ.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಅವಕಾಶವನ್ನು ಬಳಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 23, 2026ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಅವರ ಕಚೇರಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿ ಅಥವಾ ಯಾವುದೇ ಗೊಂದಲಗಳಿದ್ದಲ್ಲಿ ಅಭ್ಯರ್ಥಿಗಳು 9448999334, 9448999391, 9480886931, ಅಥವಾ 94806954260 ಸಂಖ್ಯೆಗಳಿಗೆ ಸಂಪರ್ಕಿಸಬಹುದು.
Location :
Chikmagalur,Chikmagalur,Karnataka
First Published :
Jun 22, 2026 12:35 PM IST

