Advertisement
Advertisement

Job Alert: ಡಿಗ್ರಿ ಮುಗಿಸಿ ಕೆಲಸ ಹುಡುಕ್ತಿದ್ರೆ ಇಲ್ಲಿದೆ ನೋಡಿ ಬಂಪರ್‌ ಅವಕಾಶ!

Hyp 5194489 cropped 25052025 084620 img 20250518 164309 waterm 2.jpg


Last Updated:

ಮೈಸೂರು: ರಾಷ್ಟ್ರೀಯ ಘೋಷಣ್ ಅಭಿಯಾದ ಯೋಜನೆಯಡಿ ಬಿಳಿಗೆರೆ, ಮೈಸೂರು ನಗರ, ಪಿರಿಯಾಪಟ್ಟಣ ತಾಲ್ಲೂಕುಗಳಲ್ಲಿ 03 ತಾಲ್ಲೂಕು ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2 ವರ್ಷ ಅನುಭವ, ಸ್ಥಳೀಯ ಭಾಷಾ ಜ್ಞಾನ ಅಗತ್ಯ.

ಸಾಂದರ್ಭಿಕ ಚಿತ್ರಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಘೋಷಣ್ ಅಭಿಯಾನದ ಯೋಜನೆಯ(National Slewrest Campaign) ಅನುಷ್ಠಾನ ಮಾರ್ಗಸೂಚಿಯನ್ವಯ ತಾಲ್ಲೂಕು ಮಟ್ಟದಲ್ಲಿ 03 ತಾಲ್ಲೂಕು ಸಂಯೋಜಕರ ಹುದ್ದೆಯನ್ನು ತಾತ್ಕಾಲಿಕ ಗೌರವಧನ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ (Candidates) ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕು ಸಂಯೋಜಕರ ಹುದ್ದೆಗೆ ಬಿಳಿಗೆರೆ ತಾಲ್ಲೂಕಿನಲ್ಲಿ 01, ಮೈಸೂರು ನಗರ ತಾಲ್ಲೂಕಿನಲ್ಲಿ 01, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ 01, ಹುದ್ದೆಗಳು ಖಾಲಿ ಇದ್ದು, ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್ ಬೆಂಬಲದೊಂದಿಗೆ ಕನಿಷ್ಠ 2 ವರ್ಷ ಅನುಭವವನ್ನು ಹೊಂದಿರಬೇಕು. ಅರ್ಜಿದಾರರು ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಹೊಂದಿರಬೇಕು, ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. Rs. 20,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Mandya: ಸರ್ಕಾರ ಹಾಗೂ ರೈತ ಸಂಘದ ನಡುವೆ ತಿಕ್ಕಾಟ- ಆರಂಭದಲ್ಲೇ ಕಾವೇರಿ ಆರತಿಗೆ ವಿಘ್ನ!

ನಿಗದಿತ ನಮೂನೆಯಲ್ಲಿ ಅರ್ಜಿ, ಎಸ್.ಎಸ್.ಎಲ್.ಸಿ ಅಂಕ ಪಟ್ಟಿ, ಹುದ್ದೆಗೆ ನಿಗದಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರ, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಭವನ, ಕೃಷ್ಣದೇವರಾಯ ಸರ್ಕಲ್, ವಿಜಯನಗರ 2ನೇ ಹಂತ, ಮೈಸೂರು ಇವರಿಗೆ ಜೂನ್ 10 ರೊಳಗೆ ಸಲ್ಲಿಸಬೇಕಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ದೂ.ಸಂ:0821-2495432 ನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

TOP