Advertisement
Advertisement

Job Fair: ಈ ಉದ್ಯೋಗ ಮೇಳದಿಂದ ಹಲವರಿಗೆ ಉಪಯೋಗ, 719 ಅಭ್ಯರ್ಥಿಗಳಿಗೆ ಸಿಕ್ತು ಜಾಬ್!

Rapidreadnewlogo.svg .svgxml


Last Updated:

ಧಾರವಾಡದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 3,085 ಅಭ್ಯರ್ಥಿಗಳು ಭಾಗವಹಿಸಿ, 719 ಅಭ್ಯರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿ ಸ್ಥಳದಲ್ಲಿಯೇ ಆಫರ್ ಲೇಟರ್ ಪಡೆದರು. 122 ಕಂಪನಿಗಳು ಭಾಗವಹಿಸಿ ನೇರ ಸಂದರ್ಶನ ನಡೆಸಿದವು.

Rapid Read
ಉದ್ಯೋಗ ಮೇಳ
ಉದ್ಯೋಗ ಮೇಳ

ಧಾರವಾಡ: ವಿದ್ಯಾಕಾಶಿ ಧಾರವಾಡದ (Dharwad) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ನಗರದ ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ (Job Fair) ಒಟ್ಟು 3,085 ಅಭ್ಯರ್ಥಿಗಳು ಭಾಗವಹಿಸಿದ್ದರು. ವಿವಿಧ ಕ್ಷೇತ್ರಗಳ 122 ಕಂಪನಿಗಳು (ಉದ್ಯೋಗದಾತರು) ಮೇಳದಲ್ಲಿ ಹಾಜರಾಗಿ ಅಭ್ಯರ್ಥಿಗಳ ನೇರ ಸಂದರ್ಶನ (Direct Interview) ನಡೆಸಿ, ಪ್ರಾಥಮಿಕ ಹಂತದ ಪರಿಶೀಲನೆ ನಂತರ 1,253 ಅಭ್ಯರ್ಥಿಗಳು ಅಂತಿಮ ಪಟ್ಟಿಗೆ (ಶಾರ್ಟ್ ಲಿಸ್ಟ್) ಆಯ್ಕೆಯಾಗಿದ್ದು, ಅಂತಿಮವಾಗಿ 719 ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ (Select) ಮಾಡಿ, ಸ್ಥಳದಲ್ಲಿಯೇ ಆಫರ್ ಲೇಟರ್ ನೀಡಲಾಗಿದೆ.

ವಿವಿಧ ಸಂಸ್ಥೆಗಳ ಸಂದರ್ಶನ

ಉದ್ಯೋಗ ಮೇಳದಲ್ಲಿ ಐಟಿ, ಉತ್ಪಾದನಾ ಕ್ಷೇತ್ರ, ಮಾರಾಟ, ಬ್ಯಾಂಕಿಂಗ್, ಶಿಕ್ಷಣ ಸೇರಿದಂತೆ ಹಲವು ವಿಭಾಗಗಳ ಕಂಪನಿಗಳು ಭಾಗವಹಿಸಿದ್ದವು. ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ವಿವಿಧ ಸಂಸ್ಥೆಗಳ ಸಂದರ್ಶನದಲ್ಲಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ.

ಯುವಕರಿಗೆ ವೇದಿಕೆ

ಉದ್ಯೋಗ ಮೇಳವನ್ನು ಉದ್ಘಾಟನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶಗಳಿಗಾಗಿ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ.

ಉತ್ತಮ ಸ್ಪಂದನೆ

ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಡದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಪೀಡ್ ಬ್ಯಾಕ್ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.

ಉದ್ಯೋಗ ಮೇಳ

ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಕರೆ ನೀಡಿದರು.



Source link

Leave a Reply

Your email address will not be published. Required fields are marked *

TOP