Last Updated:
ಮಂಡ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ಶಾಲೆಗಳಲ್ಲಿ 50 ಅತಿಥಿ ಶಿಕ್ಷಕ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ, ಮೇ 27 ಅರ್ಜಿ ಕೊನೆ ದಿನ, ಸಂಬಳ 12 ಸಾವಿರದಿಂದ 16 ಸಾವಿರ ಸಿಗುವ ಅವಕಾಶವಿದೆ.
ಮಂಡ್ಯ : ನಿರುದ್ಯೋಗದ (Un-Employment) ಬೇಗೆಯಲ್ಲಿ ಬೇಯುತ್ತಿರುವ ಸಾವಿರಾರು ಯುವ ಪದವೀಧರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ! ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಬರೋಬ್ಬರಿ 50 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ (Minorities Welfare Department) ಬಾಗಿಲು ತೆರೆದಿದೆ! ಆದರೆ, ಕೊನೆಯ ದಿನಾಂಕ ಕೇವಲ ಕೆಲವೇ ದಿನಗಳು (Few Days) ಬಾಕಿ ಇದೆ!
2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅತಿಥಿ ಶಿಕ್ಷಕರು – 37 ಹುದ್ದೆಗಳು, ಅತಿಥಿ ಉಪನ್ಯಾಸಕರು – 13 ಹುದ್ದೆಗಳು ಸೇರಿದಂತೆ ಒಟ್ಟು – ಬರೋಬ್ಬರಿ 50 ಹುದ್ದೆಗಳ ಲಭ್ಯತೆ ಇದೆ.
ಒಂದೆರಡಲ್ಲ, ಮಂಡ್ಯ ಜಿಲ್ಲೆಯ 5ಕ್ಕೂ ಹೆಚ್ಚು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಈ ಹುದ್ದೆಗಳು ಖಾಲಿ ಇವೆ!
- ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮಂಡ್ಯ
- ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ
- ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ
- ಮಂಡ್ಯ ಟೌನ್ ಮೌಲಾನಾ ಆಜಾದ್ ಮಾದರಿ ಶಾಲೆ
- ಮಂಡ್ಯ ಟೌನ್ ಮೌಲಾನಾ ಆಜಾದ್ ಶಾಲೆ, ಕಲ್ಕುಣಿ, ಮಳವಳ್ಳಿ ತಾಲ್ಲೂಕು
ಅಷ್ಟೇ ಅಲ್ಲ, ಹೊಸದಾಗಿ ಪ್ರಾರಂಭವಾಗುತ್ತಿರುವ ಅಲ್ಪಸಂಖ್ಯಾತ ಮಹಿಳೆಯರ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಡಿಮ್ಯಾಂಡ್ ಜೋರಾಗಿದೆ! ಮಹಿಳಾ ಪದವೀಧರರಿಗೆ ಇದು ಬಂಗಾರದ ಅವಕಾಶ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 27, 2026. ಅರ್ಜಿ ಸಲ್ಲಿಸಬೇಕಾದ ಸ್ಥಳ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ, ಮೌಲಾನಾ ಆಜಾದ್ ಭವನ, ಕೆರೆಯಂಗಳ, ಮಂಡ್ಯ ಹಾಗೂ ಸಂಪರ್ಕ ಸಂಖ್ಯೆ: 08232-297240. ಇಂದು ಮೇ 20, ಕೈಯಲ್ಲಿರೋದು ಬರೀ ಒಂದು ವಾರ ಮಾತ್ರ!
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಮಾಸಿಕ ₹12,000 ರಿಂದ ₹16,000ವರೆಗೆ ಗೌರವಧನ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ! ಮನೆಯ ಪಕ್ಕದಲ್ಲೇ ಸರ್ಕಾರಿ ಶಾಲೆಯಲ್ಲಿ ಕೆಲಸ, ಜೊತೆಗೆ ಗೌರವಯುತ ಸಂಬಳ, ಇದಕ್ಕಿಂತ ಹೆಚ್ಚೇನು ಬೇಕು?
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ SSLC ಮತ್ತು PUC ಅಂಕಪಟ್ಟಿಗಳು, ಪದವಿ/ಸ್ನಾತಕೋತ್ತರ ಪದವಿಯ ಮಾರ್ಕ್ಸ್ ಕಾರ್ಡ್ಗಳು, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆಯ ವಿವರಗಳು, ಹಿಂದಿನ ಕೆಲಸದ ಅನುಭವ ಪ್ರಮಾಣಪತ್ರ (ಇದ್ದಲ್ಲಿ) ಹಾಗೂ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಗಳನ್ನು ಸಿದ್ಧವಾಗಿಟ್ಟುಕೊಂಡು ನಿಗದಿತ ದಿನಾಂಕದೊಳಗೆ ಕಚೇರಿಗೆ ಸಲ್ಲಿಸಬೇಕಾಗಿ ವಿನಂತಿಸಲಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಈ ಹುದ್ದೆಗಳ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕ ಹಾಗೂ ವ್ಯವಸ್ಥಿತ ಹಂತಗಳಲ್ಲಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೊದಲಿಗೆ ನಿಗದಿತ ಕಚೇರಿಗೆ ಭೇಟಿ ನೀಡಿ ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ಸಲ್ಲಿಕೆಯಾದ ಎಲ್ಲಾ ಅರ್ಜಿಗಳನ್ನು ಹಾಗೂ ಅಭ್ಯರ್ಥಿಗಳು ಲಗತ್ತಿಸಿರುವ ಅಗತ್ಯ ದಾಖಲೆಗಳನ್ನು ಇಲಾಖೆಯ ಅಧಿಕಾರಿಗಳು ಮೊದಲ ಹಂತದಲ್ಲಿ ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ. ದಾಖಲಾತಿಗಳ ಪರಿಶೀಲನೆ ಯಶಸ್ವಿಯಾಗಿ ಮುಗಿದ ಬಳಿಕ, ಅಭ್ಯರ್ಥಿಗಳ ವಿದ್ಯಾರ್ಹತೆಯ ಅಂಕಗಳು ಮತ್ತು ಅರ್ಹತೆಯ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಅದರನ್ವಯ ಸಂದರ್ಶನವನ್ನು ನಡೆಸಲಾಗುತ್ತದೆ. ಈ ಸಂದರ್ಶನದಲ್ಲಿ ಅಂತಿಮವಾಗಿ ಅತ್ಯುತ್ತಮ ಪ್ರದರ್ಶನ ನೀಡಿ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಇಲಾಖೆಯ ವತಿಯಿಂದ ನೇರ ನೇಮಕಾತಿ ಪತ್ರವನ್ನು ವಿತರಿಸಲಾಗುತ್ತದೆ.
Mandya,Mandya,Karnataka
May 20, 2026 10:30 PM IST

