Last Updated:
ಕನ್ನಡ ಪುಸ್ತಕದ ವಿರುದ್ಧ ರಾಜ್ಯದ ಶಿಕ್ಷಣ ತಜ್ಞರು (Educational Experts) ಆಕ್ರೋಶ ಹೊರಹಾಕಿದ್ದಾರೆ. ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಟ್ಟಿದ್ದೇಕೆ ಎಂದು ಪ್ರಶ್ನಿಸಿ, ಪಠ್ಯದಲ್ಲಿ ಮಾಂಸಾಹಾರ ಬಹಿಷ್ಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಎನ್ಸಿಇಆರ್ಟಿಯ (NCERT) 6ನೇ ತರಗತಿಯ ಕನ್ನಡ ಪುಸ್ತಕ (Kannada Book) ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಶೈಕ್ಷಣಿಕ ವರ್ಷದಿಂದ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಸಂಯೋಜಿತ ಶಾಲೆಗಳಲ್ಲಿ 6ನೇ ತರಗತಿ ಮತ್ತು ಅದಕ್ಕಿಂತ ಮೇಲಿನ ತರಗತಿಗಳಿಗೆ ಪರಿಚಯಿಸಿದ ಕನ್ನಡ ಪುಸ್ತಕದ ವಿರುದ್ಧ ರಾಜ್ಯದ ಶಿಕ್ಷಣ ತಜ್ಞರು (Educational Experts) ಆಕ್ರೋಶ ಹೊರಹಾಕಿದ್ದಾರೆ. ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಟ್ಟಿದ್ದೇಕೆ ಎಂದು ಪ್ರಶ್ನಿಸಿ, ಪಠ್ಯದಲ್ಲಿ ಮಾಂಸಾಹಾರ ಬಹಿಷ್ಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎನ್ಸಿಇಆರ್ಟಿ ಕನ್ನಡ (R3) ಪಠ್ಯಪುಸ್ತಕಗಳ ಮೂಲಕ ಸಾಂಸ್ಕೃತಿಕ ಹೇರಿಕೆ ಮಾಡಲಾಗುತ್ತಿದೆ. NCERT 6ನೇ ತರಗತಿಯ ‘R3’ ಕನ್ನಡ ಪಠ್ಯಪುಸ್ತಕವು ದಿಗ್ಭ್ರಮೆ ಮೂಡಿಸುವಂತಿದೆ ಎಂದು ಅಸಮಾಧಾನ ಹೊರಹಾಕಿರುವ PAFRE ಸಂಘಟನೆ, ಮಕ್ಕಳಿಗೆ ರಾಜಕೀಯ ಮತ್ತು ಸಾಂಸ್ಕೃತಿಕ ಹೇರಿಕೆಯ ಅಸ್ತ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಕರ್ನಾಟಕದ ಸಾಂಸ್ಕೃತಿಕ ಮತ್ತು ಸಾಮಾಜಿಕ ವೈವಿಧ್ಯತೆಯನ್ನು ಬಿಂಬಿಸುವ ಯಾವುದೇ ಪಾಠಗಳು ಇಲ್ಲ, ಕರಾವಳಿ, ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆ ಮೈಸೂರು ಭಾಗದ ಜಾನಪದ, ಸಾಹಿತ್ಯ ಮತ್ತು ಬದುಕು ಇಲ್ಲಿ ಕಾಣೆಯಾಗಿದೆ. 6ನೇ ತರಗತಿಯ ಮಗುವಿನ ಕುತೂಹಲ ಮತ್ತು ವಯಸ್ಸಿಗೆ ತಕ್ಕಂತಹ ಯಾವುದೇ ಚಟುವಟಿಕೆಗಳು, ಪಠ್ಯಗಳು, ಚಿತ್ರಗಳು ಅಥವಾ ಕಥೆಗಳು ಇದರಲ್ಲಿಲ್ಲ ಎಂದು ಕಿಡಿಕಾರಿದೆ.
(ವರದಿ: ಶರಣು ಹಂಪಿ, ನ್ಯೂಸ್18 ಕನ್ನಡ, ಬೆಂಗಳೂರು)
Bangalore,Karnataka
Jun 24, 2026 11:24 PM IST

